September 6, 2026
Uncategorized

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಪೋಷಕರಿಗೆ ಆಟೋಟ ಸ್ಪರ್ದೆ ಮತ್ತು ಎಕ್ಸೆಲ್ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಇದರ ಉದ್ಘಾಟನೆಯು ಅ 25 ರಂದು ನಡೆಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ಲೇ ಪಾರ್ಕ್ ಉದ್ಘಾಟಿಸಿ, ಬಲೂನು ಎತ್ತರಕ್ಕೆ ಹಾರಿಸುವ ಮೂಲಕ ಎಕ್ಸೆಲ್ ಪೋಷಕರ ಆಟೋಟ ಸ್ಪರ್ದೇಗೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಸುಮಂತ್ ಕುಮಾರ್ ಜೈನ್ ಅವರು ಸಂಸ್ಕಾರಭರಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕೆಂಬ ಸಂಕಲ್ಪ ನಮ್ಮದು.ಮಕ್ಕಳು ಹೆತ್ತವರಿಗೆ ಒಳ್ಳೆಯ ಮಗನಾಗಿ ದೇಶಕ್ಕೆ ಆಸ್ತಿಯಾಗಬೇಕು.ಅಂತಹ ಶಿಕ್ಷಣವನ್ನು ನಮ್ಮ ವಿದ್ಯಾ ಸಂಸ್ಥೆಯಲ್ಲಿ ನೀಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶ್ರೀ ಅರಮಲೆಬೆಟ್ಟ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರಾದ ಸುಕೇಶ್ ಕುಮಾರ್ ಜೈನ್ ಕಡಂಬು ಮಾತನಾಡಿ ವಿದ್ಯಾಸಂಸ್ಥೆಗಳು ಬೆಳೆದಾಗ ಆ ಊರು,ಪರಿಸರ ಕೂಡ ಅಭಿವೃದ್ದಿ ಹೊಂದುತ್ತದೆ.ಎಕ್ಸೆಲ್ ಸ್ಥಾಪನೆಯಿಂದ ಗುರುವಾಯನಕೆರೆ ಪರಿಸರದ ಸೊಬಗು ಹೆಚ್ಚಿದೆ ಎಂದರು.

ಮುಂಡಾಜೆ ಯಂಗ್ ಚಾಲೇಂಜರ್ಸ್ ಕ್ಲಬ್ ನ ಮುಖ್ಯಸ್ಥರಾದ ನಾಮ್ ದೇವ್ ರಾವ್ ಮುಂಡಾಜೆ ಮಾತನಾಡಿ ಮಕ್ಕಳ ಭವಿಷ್ಯದ ರೂಪಿಸುವ ಶಿಕ್ಷಣ ಎಕ್ಸೆಲ್ ನಲ್ಲಿ ಸಿಗುತ್ತಿದ್ದು ರಾಜ್ಯದ ಉದ್ದಗಲಕ್ಕೂ ಎಕ್ಸೆಲ್ ನ ಕಂಪು ಪಸರಿಸಿದೆ ಎಂದರು. ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ,ಎಕ್ಸೆಲ್ ಟೆಕ್ನೋ ಶಾಲೆಯ ಮುಖ್ಯ ಶಿಕ್ಷಕಿ ಸಹನಾ ಜೈನ್ ಬಿ,ವೇಣೂರು ಎಕ್ಸೆಲ್ ಹೈಸ್ಕೂಲ್ ಶಾಲೆಯ ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್ ಉಪಸ್ಥಿತರಿದ್ದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಸುಕೇಶ್ ಕುಮಾರ್ ಜೈನ್ ಕಡಂಬು ಮತ್ತು ನಾಮ್ ದೇವ್ ರಾವ್ ಮುಂಡಾಜೆ ಅವರನ್ನು ಸನ್ಮಾನಿಸಲಾಯಿತು. ಎಕ್ಸೆಲ್ ಟೆಕ್ನೋ ಶಾಲೆಯ ಸಂಯೋಜಕಿ ಲೀನಾ ಪ್ಲೋರಿನ್ ಪಿಂಟೋ ಸ್ವಾಗತಿಸಿ,ಶಿಕ್ಷಕಿ ಸ್ವಾತಿ ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು.ಗೀತಾ ಕಾರ್ಯಕ್ರಮ ನಿರೂಪಿಸಿದರು. ಚೇತನಾ ವಂದಿಸಿದರು. ಪವಿತ್ರಾ ಕೋಟ್ಯಾನ್ ಹಾಗೂ ಇತರರು ಸಹಕರಿಸಿದರುಬಳಿಕ ವಿದ್ಯಾರ್ಥಿಗಳ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

Related posts

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!