September 6, 2026
ಕರಾವಳಿಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶ ಮಾಡಿದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮತ್ತೆ ಎರಡನೇ ಭಾರಿ ಅ.27 ರಂದು ಪ್ರತಿಭಟನೆ ನಡೆಸಲು ಬೆಳ್ತಂಗಡಿ ಪೊಲೀಸರಿಗೆ ಮನವಿ ಪತ್ರ ನೀಡಿದ್ದರು ಆದ್ರೆ ಪೊಲೀಸರು ಪ್ರತಿಭಟನೆ ಮಾಡಲು ನಿರಾಕರಣೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸರಿಗೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಅನಿಲ್ ಅಂತರ ಅ.27 ರಂದು ಪ್ರತಿಭಟನೆ ನಡೆಸಲು ಅ.25 ರಂದು ಮನವಿ ನೀಡಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (30021/25) ವಿಚಾರಣೆ ನಡೆದು ಆದೇಶ ಬಾಕಿಯಿರುವ ಕಾರಣದಿಂದ ಯಾವುದೇ ಪ್ರತಿಭಟನೆಗಳನ್ನು ಮಾಡಲು ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳ್ತಂಗಡಿ ಪೊಲೀಸರು ಅನುಮತಿಯನ್ನು ನಿರಾಕರಿಸಿ ಹಿಂಬರಹ ನೀಡಿದ್ದಾರೆ.

ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಕಡೆಯಿಂದ ಈ ಮೊದಲು ಪ್ರತಿಭಟನೆ ಮಾಡಲು ಬೆಳ್ತಂಗಡಿ ತಹಶೀಲ್ದಾರ್ ಗೆ ಅನುಮತಿ ಕೇಳಿದ್ದರು ಆದ್ರೆ ಬೆಳ್ತಂಗಡಿ ಪೊಲೀಸರ ನಿರ್ದೇಶನದಂತೆ ತಹಶೀಲ್ದಾರ್ ಅನುಮತಿಯನ್ನು ನೀಡಿರಲ್ಲಿಲ್ಲ. ಇದೀಗ ಎರಡನೇ ಭಾರಿ ಕೂಡ ಪ್ರತಿಭಟನೆಗೆ ಅನುಮತಿ ಸಿಕ್ಕಿಲ್ಲ.

Related posts

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya
error: Content is protected !!