July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

ಕೊಕ್ಕಡ: ವಿಶ್ವ ಹಿಂದೂ ಪರಿಷದ್ ಕೊಕ್ಕಡ ಘಟಕ ಹಾಗೂ ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇವರ ಸಹಯೋಗದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ ಅ.28ರಿಂದ ನ.03ರವರೆಗೆ ಭಕ್ತಿಭಾವದಿಂದ ನಡೆಯಲಿದೆ.

ಅ.28ರಂದು ಸಂಜೆ 7.00 ಗಂಟೆಗೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ರಂಗಪೂಜೆ ನೆರವೇರಲಿದೆ. ಅ.29ರಂದು ಮಧ್ಯಾಹ್ನ 1.00 ಗಂಟೆಗೆ ಕೊಕ್ಕಡದಿಂದ ಹೊರಟು ದೇವರ ಮೂರ್ತಿಯನ್ನು ಶಿಶಿಲ ಬರ್ಗುಳದ ದಿ.ಪುರುಷೋತ್ತಮ ನಾಯಕ್ ಅವರ ಮನೆಯಿಂದ ಕೊಕ್ಕಡಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳುವ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರಾರ್ಥನೆಯೊಂದಿಗೆ ಭಜನೆ ಆರಂಭಗೊಂಡು ನ.01ರ ತನಕ ಪ್ರತಿದಿನ ಕೊಕ್ಕಡ ಶ್ರೀರಾಮ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡು ನಗರ ಸಂಚಾರದಿಂದ ಮುಕ್ತಾಯಗೊಳ್ಳಲಿದೆ.

ನಗರ ಭಜನಾ ಮಹೋತ್ಸವದ ಶೋಭಾಯಾತ್ರೆಯು ನ.2ರಂದು ಸಂಜೆ 6 ಗಂಟೆಗೆ ಆರಂಭಗೊಂಡು ಮರುದಿನ ಬೆಳಗ್ಗೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ನ.2ರಂದು ಭಜನಾ ಸಪ್ತಾಹದ ವಿಶೇಷ ಆಕರ್ಷಣೆಯಾಗಿ ಸ್ಥಳೀಯ ಹಾಗೂ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ ನಡೆಯಲಿದೆ. ಕೊಕ್ಕಡ ಕೇಸರಿ ಗೆಳೆಯರ ಬಳಗದ ಪ್ರಾಯೋಜಕತ್ವದಲ್ಲಿ ಆಹ್ವಾನಿತ ಕುಣಿತ ಭಜನಾ ತಂಡಗಳು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು ಅವರಿಂದ ಭಕ್ತಿ ಸ್ಫೂರ್ತಿ ತುಂಬಿದ ಕುಣಿತ ಭಜನೆ ಪ್ರದರ್ಶನಗಳು ನಡೆಯಲಿವೆ. ಪ್ರತಿದಿನ ರಾತ್ರಿ 7.30ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ಸಮಿತಿಯವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya
error: Content is protected !!