September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿಯ ಉಪ- ಉಪಕುಲಪತಿ ಹಾಗೂ ಧಾರವಾಡ ಎಸ್.ಡಿ.ಎಂ ಎಜ್ಯೂಕೇಶನ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್ ಇವರು ಅ.24 ರಂದು ಭೇಟಿ ನೀಡಿದರು.


ಭೇಟಿಯ ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಲೀಡರ್ ಇದ್ದ ಹಾಗೆ ಫಾಲೋರ‍್ಸ್ ಇರುತ್ತಾರೆ. ಪೂಜ್ಯರಂತಹ ಮಹಾನ್ ವ್ಯಕ್ತಿಯ ಲೀಡರ್‌ಶಿಪ್ ನಮಗಿರುವಾಗ ನಾವೇ ಅತ್ಯಂತ ಧನ್ಯರು ಎಂದರು. ಇಲ್ಲಿನ ವೈದ್ಯರಲ್ಲಿ ಸಿಬ್ಬಂದಿಗಳಲ್ಲಿ ವಿಶೇಷವಾಗಿ ನಾನು ನಗುಮೊಗವನ್ನು ಕಾಣುತ್ತಿದ್ದೇನೆ. ಪೂಜ್ಯರ ಮಾರ್ಗದರ್ಶನದಲ್ಲಿ, ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ನಾಯಕತ್ವದಲ್ಲಿ ಆಸ್ಪತ್ರೆಯು ಬೆಳೆಯುತ್ತಿದೆ. ಪೂಜ್ಯರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುತ್ತಿರುವ ನಿಮ್ಮೆಲ್ಲರಿಂದ ಈ ಆಸ್ಪತ್ರೆ ಮತ್ತಷ್ಟು ಬೆಳಯಲಿದೆ ಎಂದರು.


ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಪೇಥಲಾಜಿಸ್ಟ್ ಡಾ| ಮೇಘಾ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya
error: Content is protected !!