23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ.26ರಂದು ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯನ್ನು ಅದ್ದೂರಿಯಾಗಿ ದೀಪಕ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನ. 23ರಂದು ನಡೆಯುವ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದುಬೈ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಉದ್ಯಮಿ ಎಸ್ ಆರ್ ಜಿತೇಂದ್ರ ಸುವರ್ಣ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಶ್ರೀಮತಿ ಗೀತಾಂಜಲಿ ಸುವರ್ಣ ಉಡುಪಿ, ಶ್ರೀಮತಿ ಕೃತಿನ್ ಅಮೀನ್ ಮಂಗಳೂರು ಹಾಗೂ ಇತರ ಗಣ್ಯರು ಹಾಜರಿದ್ದರು. ಗೆಜ್ಜೆಗಿರಿಯ ಯಾತ್ರಿ ನಿವಾಸದ ಉದ್ಘಾಟನೆಯ ಸಂದರ್ಭದಲ್ಲಿ ಹೆಚ್ಚಿನ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಯವರು ತಿಳಿಸಿದರು.

ಪ್ರಜ್ಞಾ ಓಡಿಲ್ನಾಳ ನಿರೂಪಿಸಿದ ಕಾರ್ಯಕ್ರಮದಲ್ಲಿ ದುಬೈ ಬಿಲ್ಲವ ಬಂಧುಗಳ ಮತ್ತು ಶ್ರೀಮತಿ ಶೃತಿ ಹೆರಾಜೆ ತಂಡದವರಿಂದ ನೃತ್ಯ ಪ್ರದರ್ಶನ ನೆರೆದಿದ್ದ ಜನರ ಮನ ಸೂರೆಗೊಂಡಿತು.

Related posts

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!