30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ವಿಚಾರಣೆಗೆ ಈವರೆಗೂ ಹಾಜರಾಗಿಲ್ಲ. ಈ ನಾಲ್ಕು ಮಂದಿ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ‌. ಸುಜಾತ ಭಟ್ ಮಾತ್ರ ಎಸ್.ಐ.ಟಿ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ನಾಲ್ಕು ಮಂದಿ ಈವರೆಗೂ ಎಸ್.ಐ.ಟಿ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ವಕೀಲೇ ಅಂಬಿಕಾ ಪ್ರಭು ಅ.27 ರಂದು ಬಂದು ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾ ಎಂದು ಕಾದು ನೋಡಬೇಕಾಗಿದೆ.

Related posts

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya
error: Content is protected !!