23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

ಬೆಳ್ತಂಗಡಿ: ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಕರ್ನಾಟಕ ದಕ್ಷಿಣ ಪ್ರಾಂತ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ ಶ್ರೀ ರಾಮ ಶಾಲೆ ಸುಳ್ಕೇರಿಯಲ್ಲಿ ಅ.26 ರಂದು ನಡೆಯಿತು.

ಕಾರ್ಯಕ್ರಮವು ಗೋಪೂಜೆಯ ಮುಖಾಂತರ ಪ್ರಾರಂಭಗೊಂಡು ಕಾರ್ಯಕ್ರಮದ ಅಧ್ಯಕ್ಷರೂ, ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷ ಎಸ್ ಆರ್ ಭಾಸ್ಕರ್ ಶಿರ್ಲಾಲು ಇವರು ಧ್ವಜಾರೋಹಣಗೈವುವ ಮೂಲಕ ಕಾರ್ಯಕ್ರಮವನ್ನು ಚಾಲನೆಗೊಳಿಸಿದರು.


ಮುಖ್ಯ ಅತಿಥಿಗಳಾಗಿ ಸುಳ್ಕೇರಿ ಶ್ರೀರಾಮ ಶಾಲೆ ಅಧ್ಯಕ್ಷ ರಾಜು ಪೂಜಾರಿ, ಕರ್ನಾಟಕ ರಾಜ್ಯ ಭಾರತೀಯ ಕಿಸಾನ್ ಸಂಘ ರಾಜ್ಯಾಧ್ಯಕ್ಷ ಭೀಮ ಸೇನಾ ಕೊಕರೆ, ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ, ಕರ್ನಾಟಕ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ರಮೇಶ್ ರಾಜು, ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ , ದಕ್ಷಿಣ ಪ್ರಾಂತ್ಯ ಮಹಿಳಾ ಪ್ರಮುಖರು ಶ್ರೀಮತಿ ಪುಟ್ಟಮ್ಮ ಶ್ರೀಕಂಠೇಗೌಡ , ಕರ್ನಾಟಕ ದಕ್ಷಿಣ ಪ್ರಾಂತ್ಯ ಪ್ರತಿನಿಧಿ ಸುಬ್ರಾಯ ಬಿ ಎಸ್, ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಅಧ್ಯಕ್ಷ ಸತ್ಯನಾರಾಯಣ ಭಟ್ , ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಅಂಬುಜಾಕ್ಷ ,ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಪ್ರಮುಖರು ಶ್ರೀಮತಿ ಶಾಂಭವಿ , ಲಯನ್ ನಿತ್ಯಾನಂದ ನಾವರ ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಭಾರತೀಯ ಕಿಸಾನ್ ಸಂಘ, ಶಿವಾನಂದ ಹೆಗಡೆ ಕರಂಬಾರು ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಭಾರತೀಯ ಕಿಸಾನ್ ಸಂಘ, ಲಿಂಗಪ್ಪನಾಯ್ಕ ಪ್ರಧಾನ ಕಾರ್ಯದರ್ಶಿ ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ಜಯ ಸಾಲಿಯನ್ ಉಪಾಧ್ಯಕ್ಷರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ವಿಜಯಕುಮಾರ್ ಜೈನ್ ನಾವರ ಮಾಧ್ಯಮ ಪ್ರಮುಖರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ಶ್ರೀಮತಿ ಶೀಲಾ ಮಹಿಳಾ ಪ್ರಮುಖರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ರೈತ ಗೀತೆಯನ್ನು ಬಳಂಜ ಗ್ರಾಮದ ಪ್ರವೀಣ್ ದೇವಾಡಿಗ, ರತ್ನಾಕರ ಶೆಟ್ಟಿ ಪ್ರದೀಪ ರವರು ಹಾಡಿದರು. ದೇವಿ ಪ್ರಸಾದ್ ಅರ್ವ ಹಾಗೂ ಲಿಂಗಪ್ಪನಾಯ್ಕ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಉಪಾಧ್ಯಕ್ಷ ಜಯಶಾಲಿಯನ್ ಸ್ವಾಗತಿಸಿದರು. ಬೆಳ್ತಂಗಡಿ ತಾಲೂಕಿನ ಸುಮಾರು 42 ಗ್ರಾಮಗಳ ಸುಮಾರು 200 ರೈತ ಸದಸ್ಯರು ಭಾಗವಹಿಸಿ ತರಬೇತಿಯನ್ನು ಪಡೆದರು. ಲಯನ್ ನಿತ್ಯಾನಂದ ನಾವರ ರವರ ಧನ್ಯವಾದವಿತ್ತರು.

Related posts

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!