July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

ಬೆಳ್ತಂಗಡಿ: ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಕರ್ನಾಟಕ ದಕ್ಷಿಣ ಪ್ರಾಂತ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ ಶ್ರೀ ರಾಮ ಶಾಲೆ ಸುಳ್ಕೇರಿಯಲ್ಲಿ ಅ.26 ರಂದು ನಡೆಯಿತು.

ಕಾರ್ಯಕ್ರಮವು ಗೋಪೂಜೆಯ ಮುಖಾಂತರ ಪ್ರಾರಂಭಗೊಂಡು ಕಾರ್ಯಕ್ರಮದ ಅಧ್ಯಕ್ಷರೂ, ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷ ಎಸ್ ಆರ್ ಭಾಸ್ಕರ್ ಶಿರ್ಲಾಲು ಇವರು ಧ್ವಜಾರೋಹಣಗೈವುವ ಮೂಲಕ ಕಾರ್ಯಕ್ರಮವನ್ನು ಚಾಲನೆಗೊಳಿಸಿದರು.


ಮುಖ್ಯ ಅತಿಥಿಗಳಾಗಿ ಸುಳ್ಕೇರಿ ಶ್ರೀರಾಮ ಶಾಲೆ ಅಧ್ಯಕ್ಷ ರಾಜು ಪೂಜಾರಿ, ಕರ್ನಾಟಕ ರಾಜ್ಯ ಭಾರತೀಯ ಕಿಸಾನ್ ಸಂಘ ರಾಜ್ಯಾಧ್ಯಕ್ಷ ಭೀಮ ಸೇನಾ ಕೊಕರೆ, ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ, ಕರ್ನಾಟಕ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ರಮೇಶ್ ರಾಜು, ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ , ದಕ್ಷಿಣ ಪ್ರಾಂತ್ಯ ಮಹಿಳಾ ಪ್ರಮುಖರು ಶ್ರೀಮತಿ ಪುಟ್ಟಮ್ಮ ಶ್ರೀಕಂಠೇಗೌಡ , ಕರ್ನಾಟಕ ದಕ್ಷಿಣ ಪ್ರಾಂತ್ಯ ಪ್ರತಿನಿಧಿ ಸುಬ್ರಾಯ ಬಿ ಎಸ್, ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಅಧ್ಯಕ್ಷ ಸತ್ಯನಾರಾಯಣ ಭಟ್ , ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಅಂಬುಜಾಕ್ಷ ,ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಪ್ರಮುಖರು ಶ್ರೀಮತಿ ಶಾಂಭವಿ , ಲಯನ್ ನಿತ್ಯಾನಂದ ನಾವರ ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಭಾರತೀಯ ಕಿಸಾನ್ ಸಂಘ, ಶಿವಾನಂದ ಹೆಗಡೆ ಕರಂಬಾರು ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಭಾರತೀಯ ಕಿಸಾನ್ ಸಂಘ, ಲಿಂಗಪ್ಪನಾಯ್ಕ ಪ್ರಧಾನ ಕಾರ್ಯದರ್ಶಿ ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ಜಯ ಸಾಲಿಯನ್ ಉಪಾಧ್ಯಕ್ಷರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ವಿಜಯಕುಮಾರ್ ಜೈನ್ ನಾವರ ಮಾಧ್ಯಮ ಪ್ರಮುಖರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ಶ್ರೀಮತಿ ಶೀಲಾ ಮಹಿಳಾ ಪ್ರಮುಖರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ರೈತ ಗೀತೆಯನ್ನು ಬಳಂಜ ಗ್ರಾಮದ ಪ್ರವೀಣ್ ದೇವಾಡಿಗ, ರತ್ನಾಕರ ಶೆಟ್ಟಿ ಪ್ರದೀಪ ರವರು ಹಾಡಿದರು. ದೇವಿ ಪ್ರಸಾದ್ ಅರ್ವ ಹಾಗೂ ಲಿಂಗಪ್ಪನಾಯ್ಕ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಉಪಾಧ್ಯಕ್ಷ ಜಯಶಾಲಿಯನ್ ಸ್ವಾಗತಿಸಿದರು. ಬೆಳ್ತಂಗಡಿ ತಾಲೂಕಿನ ಸುಮಾರು 42 ಗ್ರಾಮಗಳ ಸುಮಾರು 200 ರೈತ ಸದಸ್ಯರು ಭಾಗವಹಿಸಿ ತರಬೇತಿಯನ್ನು ಪಡೆದರು. ಲಯನ್ ನಿತ್ಯಾನಂದ ನಾವರ ರವರ ಧನ್ಯವಾದವಿತ್ತರು.

Related posts

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!