ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಹಾಗೂ ಹಿಂದೂ ರುದ್ರಭೂಮಿ ಸಮಿತಿ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ನಗರದ ಹೊಳೆಬದಿಯಲ್ಲಿ ಸುಮಾರು 40 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮವು ಅ.27 ರಂದು ಜರುಗಿತು.


ಶಾಸಕ ಹರೀಶ್ ಪೂಂಜ ಅವರು ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯನ್ನು ಲೋಕಾರ್ಪಣೆಗೈದರು. ಈ ಸಂದರ್ಭ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ನಗರಕ್ಕೆ ಅಗತ್ಯವಾಗಿ ಬೇಕಾಗಿದ್ದ ರುದ್ರಭೂಮಿಯನ್ನು ಪಂಚಾಯತು ಆಡಳಿತ ಹಾಗೂ ಹಿಂದೂ ರುದ್ರಭೂಮಿ ಸಮಿತಿಯವರು ನಿರ್ಮಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ರುದ್ರಭೂಮಿಯ ಕಟ್ಟಡದ ಎದುರು ಭಾಗಕ್ಕೆ ಶೀಟ್ ಅಳವಡಿಕೆಗೆ ರೂ.5 ಲಕ್ಷವನ್ನು ತನ್ನ ಶಾಸಕ ನಿಧಿಯಿಂದ ನೀಡಿದ್ದೇನೆ. ರುದ್ರಭೂಮಿಯ ಹತ್ತಿರವೇ ನದಿ ಇರುವುದರಿಂದ ಅಪರಕ್ರಿಯೆ ಮಾಡುವವರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನದಿಗೆ ಸ್ಟೆಫ್ ನಿರ್ಮಾಣ ಸೇರಿದಂತೆ ರುದ್ರಭೂಮಿಯ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಅವರು ಮಾತನಾಡಿ ನಗರೋತ್ಥಾನ ಅನುದಾನ ರೂ.40 ಲಕ್ಷದಲ್ಲಿ ಶಾಸಕರ ಹಾಗೂ ಸಮಿತಿಯವರ ಸಹಕಾರದಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನು ಒಳಗೊಂಡ ರುದ್ರಭೂಮಿಯ ಕಟ್ಟಡ ನಿರ್ಮಿಸಲಾಗಿದೆ. ಎದುರಿನ ಶೀಟ್ ಅಳವಡಿಕೆಗೆ ಶಾಸಕರು ರೂ.5 ಲಕ್ಷ ಅನುದಾನ ನೀಡಿದ್ದಾರೆ. ದಾನಿಗಳು ಪೂರ್ಣ ಸಹಕಾರ ನೀಡಿದ್ದಾರೆ ಎಂದು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ರುದ್ರಭೂಮಿಯಲ್ಲಿ ನಿರ್ಮಿಸಲಾದ ಶೌಚಾಲಯದ ಕಿಟಕಿ, ಬಾಗಿಲುಗಳನ್ನು ಯಾರೋ ಕಳವು ಮಾಡಿದ್ದು, ಈ ರೀತಿ ಸಾರ್ವಜನಿಕರ ಉಪಯೋಗದ ವಸ್ತುಗಳನ್ನು ಯಾರೂ ಕಳ್ಳತನ ಮಾಡಬಾರದು ಎಂದು ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ರುದ್ರಭೂಮಿಗೆ ಸಹಕಾರ ನೀಡಿದ ದಾನಿಗಳನ್ನು ಹಾಗೂ ಗುತ್ತಿಗೆದಾರರಾದ ರವಿ ಮತ್ತು ಜಯಕುಮಾರ್ ಅವರನ್ನು ಹೂ ನೀಡಿ ಶಾಸಕರು ಗೌರವಿಸಿದರು.

ವೇದಿಕೆಯಲ್ಲಿ ಪಂಚಾಯತು ಉಪಾಧ್ಯಕ್ಷೆ ಕು| ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಹಿಂದೂ ರುದ್ರಭೂಮಿ ಸಮಿತಿ ಅಧ್ಯಕ್ಷ ಶಶಿಧರ ಪೈ, ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ, ವಾರ್ಡ್ ಸದಸ್ಯ ರಜನಿ ಕುಡ್ವ, ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.
ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಹಿಂದೂ ರುದ್ರಭೂಮಿ ಸಮಿತಿ ಉಪಾಧ್ಯಕ್ಷ ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿ, ಹಿಂದೂ ರುದ್ರಭೂಮಿ ಸಮಿತಿ ಅಧ್ಯಕ್ಷ ಶಶಿಧರ ಪೈ ವಂದಿಸಿದರು.

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!