30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya
error: Content is protected !!