25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya
error: Content is protected !!