September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!