23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ ಅ.27ರಂದು ಮನವಿ ನೀಡಲು ಬಂದ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಪ್ರತಿಭಟನೆಗೆ ಅನುಮತಿ ನಿರಾಕರಣೆ:
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (30021/25) ವಿಚಾರಣೆ ನಡೆದು ಆದೇಶ ಬಾಕಿಯಿರುವ ಕಾರಣದಿಂದ ಯಾವುದೇ ಪ್ರತಿಭಟನೆಗಳನ್ನು ಮಾಡಲು ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳ್ತಂಗಡಿ ಪೊಲೀಸರು ಅನುಮತಿಯನ್ನು ನಿರಾಕರಿಸಿ ಹಿಂಬರಹ ನೀಡಿದ್ದರೂ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಮನವಿ ನೀಡಲು ಬಂದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ ಕೆವಿ, ಸೇರಿದಂತೆ ಐದು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!