23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇದರ ಶಾಲಾ ಆವರಣದಲ್ಲಿ ದತ್ತಿ ಸಪ್ತಾಹವನ್ನು ಅ.13 ರಿಂದ 18 ರವರೆಗೆ ಬಹಳ ಉತ್ಸಾಹ ಮತ್ತು ದಯೆಯ ಮನೋಭಾವದಿಂದ ಆಚರಿಸಲಾಯಿತು.

ಕಾರ್ಯಕ್ರಮವು ಶಾಲಾ ಪ್ರಾಂಶುಪಾಲರಾದ ವಂ|ಫಾ ವಿಜಯ್ ಲೋಬೊ ಅವರ ಕನಸಾಗಿದ್ದುಈ ಕಾರ್ಯಕ್ರಮದ ಪ್ರಮುಖ ಉದ್ದೇಶವೆಂದರೆ ವಿದ್ಯಾರ್ಥಿಗಳು ಕರುಣೆಯನ್ನು ತೋರಿಸಲು ಮತ್ತು ಸಹಾಯಹಸ್ತ ಚಾಚಲು ಪ್ರೋತ್ಸಾಹಿಸುತ್ತದೆ.“ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು” ಶಾಲಾ ಸಂಚಾಲಕರಾದ ಫಾ| ಅಬೆಲ್ ಲೋಬೊ ಅವರು ಹೇಳಿದರು.

ಪ್ರತಿದಿನ ಬೆಳಿಗ್ಗೆ ವಿದ್ಯಾರ್ಥಿಗಳು ಅಕ್ಕಿ ಬೇಳೆಕಾಳುಗಳು ದವಸ ಧಾನ್ಯಗಳು ದಿನಸಿ ಸಾಮಗ್ರಿಗಳು ಹಾಗೂ ನಿತ್ಯೋಪಯೋಗಿ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು.ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನುಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಷಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಷಲ್ ಸ್ಕೂಲ್ ವೇಣೂರು, ಅನುಗ್ರಹ ವೃದ್ಧಾಶ್ರಮ ಬೆಳ್ತಂಗಡಿಈ ಸಂಸ್ಥೆಗಳಿಗೆ ವಿತರಿಸಲಾಯಿತು.

ದಾನ ಎಂದರೆ ಕೇವಲ ಹಣವನ್ನು ನೀಡುವುದಲ್ಲ, ಬದಲಿಗೆ ಅಗತ್ಯವಿರುವವರೊಂದಿಗೆ ಪ್ರೀತಿ, ಕಾಳಜಿ ಮತ್ತು ಸಮಯವನ್ನು ಹಂಚಿಕೊಳ್ಳುವುದೆಂದು ಅರ್ಥಮಾಡಿಕೊಳ್ಳಲು ಈ ವಾರ ಎಲ್ಲರಿಗೂ ಸಹಾಯ ಮಾಡಿತು. ಇದು ನಿಜವಾಗಿಯೂ ಅರ್ಥಪೂರ್ಣ ಅನುಭವವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಕಾರಿಯಾಗಿದೆ.

Related posts

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!