22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿಯ ಉಪ- ಉಪಕುಲಪತಿ ಹಾಗೂ ಧಾರವಾಡ ಎಸ್.ಡಿ.ಎಂ ಎಜ್ಯೂಕೇಶನ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್ ಇವರು ಅ.24 ರಂದು ಭೇಟಿ ನೀಡಿದರು.


ಭೇಟಿಯ ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಲೀಡರ್ ಇದ್ದ ಹಾಗೆ ಫಾಲೋರ‍್ಸ್ ಇರುತ್ತಾರೆ. ಪೂಜ್ಯರಂತಹ ಮಹಾನ್ ವ್ಯಕ್ತಿಯ ಲೀಡರ್‌ಶಿಪ್ ನಮಗಿರುವಾಗ ನಾವೇ ಅತ್ಯಂತ ಧನ್ಯರು ಎಂದರು. ಇಲ್ಲಿನ ವೈದ್ಯರಲ್ಲಿ ಸಿಬ್ಬಂದಿಗಳಲ್ಲಿ ವಿಶೇಷವಾಗಿ ನಾನು ನಗುಮೊಗವನ್ನು ಕಾಣುತ್ತಿದ್ದೇನೆ. ಪೂಜ್ಯರ ಮಾರ್ಗದರ್ಶನದಲ್ಲಿ, ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ನಾಯಕತ್ವದಲ್ಲಿ ಆಸ್ಪತ್ರೆಯು ಬೆಳೆಯುತ್ತಿದೆ. ಪೂಜ್ಯರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುತ್ತಿರುವ ನಿಮ್ಮೆಲ್ಲರಿಂದ ಈ ಆಸ್ಪತ್ರೆ ಮತ್ತಷ್ಟು ಬೆಳಯಲಿದೆ ಎಂದರು.


ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಪೇಥಲಾಜಿಸ್ಟ್ ಡಾ| ಮೇಘಾ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya
error: Content is protected !!