September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿಯ ಉಪ- ಉಪಕುಲಪತಿ ಹಾಗೂ ಧಾರವಾಡ ಎಸ್.ಡಿ.ಎಂ ಎಜ್ಯೂಕೇಶನ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್ ಇವರು ಅ.24 ರಂದು ಭೇಟಿ ನೀಡಿದರು.


ಭೇಟಿಯ ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಲೀಡರ್ ಇದ್ದ ಹಾಗೆ ಫಾಲೋರ‍್ಸ್ ಇರುತ್ತಾರೆ. ಪೂಜ್ಯರಂತಹ ಮಹಾನ್ ವ್ಯಕ್ತಿಯ ಲೀಡರ್‌ಶಿಪ್ ನಮಗಿರುವಾಗ ನಾವೇ ಅತ್ಯಂತ ಧನ್ಯರು ಎಂದರು. ಇಲ್ಲಿನ ವೈದ್ಯರಲ್ಲಿ ಸಿಬ್ಬಂದಿಗಳಲ್ಲಿ ವಿಶೇಷವಾಗಿ ನಾನು ನಗುಮೊಗವನ್ನು ಕಾಣುತ್ತಿದ್ದೇನೆ. ಪೂಜ್ಯರ ಮಾರ್ಗದರ್ಶನದಲ್ಲಿ, ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ನಾಯಕತ್ವದಲ್ಲಿ ಆಸ್ಪತ್ರೆಯು ಬೆಳೆಯುತ್ತಿದೆ. ಪೂಜ್ಯರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುತ್ತಿರುವ ನಿಮ್ಮೆಲ್ಲರಿಂದ ಈ ಆಸ್ಪತ್ರೆ ಮತ್ತಷ್ಟು ಬೆಳಯಲಿದೆ ಎಂದರು.


ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಪೇಥಲಾಜಿಸ್ಟ್ ಡಾ| ಮೇಘಾ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳ ಆಹ್ವಾನ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!