September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ.26ರಂದು ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯನ್ನು ಅದ್ದೂರಿಯಾಗಿ ದೀಪಕ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನ. 23ರಂದು ನಡೆಯುವ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದುಬೈ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಉದ್ಯಮಿ ಎಸ್ ಆರ್ ಜಿತೇಂದ್ರ ಸುವರ್ಣ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಶ್ರೀಮತಿ ಗೀತಾಂಜಲಿ ಸುವರ್ಣ ಉಡುಪಿ, ಶ್ರೀಮತಿ ಕೃತಿನ್ ಅಮೀನ್ ಮಂಗಳೂರು ಹಾಗೂ ಇತರ ಗಣ್ಯರು ಹಾಜರಿದ್ದರು. ಗೆಜ್ಜೆಗಿರಿಯ ಯಾತ್ರಿ ನಿವಾಸದ ಉದ್ಘಾಟನೆಯ ಸಂದರ್ಭದಲ್ಲಿ ಹೆಚ್ಚಿನ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಯವರು ತಿಳಿಸಿದರು.

ಪ್ರಜ್ಞಾ ಓಡಿಲ್ನಾಳ ನಿರೂಪಿಸಿದ ಕಾರ್ಯಕ್ರಮದಲ್ಲಿ ದುಬೈ ಬಿಲ್ಲವ ಬಂಧುಗಳ ಮತ್ತು ಶ್ರೀಮತಿ ಶೃತಿ ಹೆರಾಜೆ ತಂಡದವರಿಂದ ನೃತ್ಯ ಪ್ರದರ್ಶನ ನೆರೆದಿದ್ದ ಜನರ ಮನ ಸೂರೆಗೊಂಡಿತು.

Related posts

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya
error: Content is protected !!