24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ.26ರಂದು ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯನ್ನು ಅದ್ದೂರಿಯಾಗಿ ದೀಪಕ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನ. 23ರಂದು ನಡೆಯುವ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದುಬೈ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಉದ್ಯಮಿ ಎಸ್ ಆರ್ ಜಿತೇಂದ್ರ ಸುವರ್ಣ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಶ್ರೀಮತಿ ಗೀತಾಂಜಲಿ ಸುವರ್ಣ ಉಡುಪಿ, ಶ್ರೀಮತಿ ಕೃತಿನ್ ಅಮೀನ್ ಮಂಗಳೂರು ಹಾಗೂ ಇತರ ಗಣ್ಯರು ಹಾಜರಿದ್ದರು. ಗೆಜ್ಜೆಗಿರಿಯ ಯಾತ್ರಿ ನಿವಾಸದ ಉದ್ಘಾಟನೆಯ ಸಂದರ್ಭದಲ್ಲಿ ಹೆಚ್ಚಿನ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಯವರು ತಿಳಿಸಿದರು.

ಪ್ರಜ್ಞಾ ಓಡಿಲ್ನಾಳ ನಿರೂಪಿಸಿದ ಕಾರ್ಯಕ್ರಮದಲ್ಲಿ ದುಬೈ ಬಿಲ್ಲವ ಬಂಧುಗಳ ಮತ್ತು ಶ್ರೀಮತಿ ಶೃತಿ ಹೆರಾಜೆ ತಂಡದವರಿಂದ ನೃತ್ಯ ಪ್ರದರ್ಶನ ನೆರೆದಿದ್ದ ಜನರ ಮನ ಸೂರೆಗೊಂಡಿತು.

Related posts

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya
error: Content is protected !!