23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ವಿಚಾರಣೆಗೆ ಈವರೆಗೂ ಹಾಜರಾಗಿಲ್ಲ. ಈ ನಾಲ್ಕು ಮಂದಿ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ‌. ಸುಜಾತ ಭಟ್ ಮಾತ್ರ ಎಸ್.ಐ.ಟಿ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ನಾಲ್ಕು ಮಂದಿ ಈವರೆಗೂ ಎಸ್.ಐ.ಟಿ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ವಕೀಲೇ ಅಂಬಿಕಾ ಪ್ರಭು ಅ.27 ರಂದು ಬಂದು ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾ ಎಂದು ಕಾದು ನೋಡಬೇಕಾಗಿದೆ.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya
error: Content is protected !!