September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ವಿಚಾರಣೆಗೆ ಈವರೆಗೂ ಹಾಜರಾಗಿಲ್ಲ. ಈ ನಾಲ್ಕು ಮಂದಿ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ‌. ಸುಜಾತ ಭಟ್ ಮಾತ್ರ ಎಸ್.ಐ.ಟಿ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ನಾಲ್ಕು ಮಂದಿ ಈವರೆಗೂ ಎಸ್.ಐ.ಟಿ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ವಕೀಲೇ ಅಂಬಿಕಾ ಪ್ರಭು ಅ.27 ರಂದು ಬಂದು ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾ ಎಂದು ಕಾದು ನೋಡಬೇಕಾಗಿದೆ.

Related posts

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!