25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!