37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya
error: Content is protected !!