September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!