23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya
error: Content is protected !!