22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya
error: Content is protected !!