37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮಿಸಲಾಯಿತು. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮಗು ಹಾಗೂ ತಂದೆಯೊಂದಿಗೆ ಗ್ರೀಟಿಂಗ್ ಕಾರ್ಡ್ ತಯಾರಿಯ ಸ್ಪರ್ಧೆಯನ್ನು ನೆರವೇರಿಸಲಾಯಿತು.

ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತರಗತಿ ಕೊಠಡಿಯ ಶೃಂಗಾರ ಸ್ಪರ್ಧೆಯನ್ನು ಆಯೋಜಿಸಲಾಯಿತು. 9ನೇ ಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರೆ 9ನೇ ಬಿ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.
ಮುಖ್ಯ ಅತಿಥಿಯಾಗಿ ಪ್ರಕಾಶ್ ಕಾಮತ್ ಪ್ರಾಂಶುಪಾಲರು ಎಸ್ ಡಿ ಎಂ ಮಹಿಳಾ ಪೊಲಿಟೆಕ್ನಿಕ್ ಕಾಲೇಜ್ ಉಜಿರೆ, ಇವರು ಭಾಗವಹಿಸಿ ಶುಭಾಶಯಗಳು ವ್ಯಕ್ತಪಡಿಸಿದರು. ಅಲ್ಲದೆ ದೀಪಾವಳಿಯ ಆಚರಣೆಯಲ್ಲಿ ನಮ್ಮ ಸಂಸ್ಥೆಗಳು ಮಕ್ಕಳಿಗೆ ಹೊಸ ಮೆರಗನ್ನು ನೀಡುತ್ತಿದೆ ಎಂಬುದರೊಂದಿಗೆ, ದೀಪ, ಹಣತೆ ಬೆಳಗಿಸಿ, ಲಕ್ಷ್ಮಿ ಪೂಜೆಯೊಂದಿಗೆ, ದೀಪಾವಳಿಗೆ ನೀರು ತುಂಬಿಸುವ ವಿಶೇಷತೆಯೊಂದಿಗೆ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಶಿಕ್ಷಕರುಗಳಾದ ಮೇನಿತಾ ಶೆಟ್ಟಿ, ಚೇತನ, ಕಾರೂಣ್ಯ, ಮುರಳಿ, ಪ್ರಮೀಳಾ ರವರ ಸಂಘಟನೆಯೊಂದಿಗೆ ಅಧ್ಯಾಪಕ ವೃಂದ ದವರ ಸಹಕಾರದೊಂದಿಗೆ, ಕುಮಾರಿ ನಿಧಿಶಾ ನಿರೂಪಿಸಿ, ಕುಮಾರಿ ದಿಶಾ ಡಿಎ ಸ್ವಾಗತಿಸಿ, ಆಧ್ಯಾ ಜೈನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
error: Content is protected !!