25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮಿಸಲಾಯಿತು. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮಗು ಹಾಗೂ ತಂದೆಯೊಂದಿಗೆ ಗ್ರೀಟಿಂಗ್ ಕಾರ್ಡ್ ತಯಾರಿಯ ಸ್ಪರ್ಧೆಯನ್ನು ನೆರವೇರಿಸಲಾಯಿತು.

ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತರಗತಿ ಕೊಠಡಿಯ ಶೃಂಗಾರ ಸ್ಪರ್ಧೆಯನ್ನು ಆಯೋಜಿಸಲಾಯಿತು. 9ನೇ ಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರೆ 9ನೇ ಬಿ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.
ಮುಖ್ಯ ಅತಿಥಿಯಾಗಿ ಪ್ರಕಾಶ್ ಕಾಮತ್ ಪ್ರಾಂಶುಪಾಲರು ಎಸ್ ಡಿ ಎಂ ಮಹಿಳಾ ಪೊಲಿಟೆಕ್ನಿಕ್ ಕಾಲೇಜ್ ಉಜಿರೆ, ಇವರು ಭಾಗವಹಿಸಿ ಶುಭಾಶಯಗಳು ವ್ಯಕ್ತಪಡಿಸಿದರು. ಅಲ್ಲದೆ ದೀಪಾವಳಿಯ ಆಚರಣೆಯಲ್ಲಿ ನಮ್ಮ ಸಂಸ್ಥೆಗಳು ಮಕ್ಕಳಿಗೆ ಹೊಸ ಮೆರಗನ್ನು ನೀಡುತ್ತಿದೆ ಎಂಬುದರೊಂದಿಗೆ, ದೀಪ, ಹಣತೆ ಬೆಳಗಿಸಿ, ಲಕ್ಷ್ಮಿ ಪೂಜೆಯೊಂದಿಗೆ, ದೀಪಾವಳಿಗೆ ನೀರು ತುಂಬಿಸುವ ವಿಶೇಷತೆಯೊಂದಿಗೆ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಶಿಕ್ಷಕರುಗಳಾದ ಮೇನಿತಾ ಶೆಟ್ಟಿ, ಚೇತನ, ಕಾರೂಣ್ಯ, ಮುರಳಿ, ಪ್ರಮೀಳಾ ರವರ ಸಂಘಟನೆಯೊಂದಿಗೆ ಅಧ್ಯಾಪಕ ವೃಂದ ದವರ ಸಹಕಾರದೊಂದಿಗೆ, ಕುಮಾರಿ ನಿಧಿಶಾ ನಿರೂಪಿಸಿ, ಕುಮಾರಿ ದಿಶಾ ಡಿಎ ಸ್ವಾಗತಿಸಿ, ಆಧ್ಯಾ ಜೈನ್ ಧನ್ಯವಾದವಿತ್ತರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya
error: Content is protected !!