32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya
error: Content is protected !!