25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya
error: Content is protected !!