22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!