September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಸಾಲಿಯಾನ್ ನಿಧನ

Suddi Udaya
error: Content is protected !!