September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ ಅ.27ರಂದು ಮನವಿ ನೀಡಲು ಬಂದ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಪ್ರತಿಭಟನೆಗೆ ಅನುಮತಿ ನಿರಾಕರಣೆ:
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (30021/25) ವಿಚಾರಣೆ ನಡೆದು ಆದೇಶ ಬಾಕಿಯಿರುವ ಕಾರಣದಿಂದ ಯಾವುದೇ ಪ್ರತಿಭಟನೆಗಳನ್ನು ಮಾಡಲು ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳ್ತಂಗಡಿ ಪೊಲೀಸರು ಅನುಮತಿಯನ್ನು ನಿರಾಕರಿಸಿ ಹಿಂಬರಹ ನೀಡಿದ್ದರೂ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಮನವಿ ನೀಡಲು ಬಂದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ ಕೆವಿ, ಸೇರಿದಂತೆ ಐದು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya
error: Content is protected !!