22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ.26ರಂದು ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯನ್ನು ಅದ್ದೂರಿಯಾಗಿ ದೀಪಕ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನ. 23ರಂದು ನಡೆಯುವ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದುಬೈ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಉದ್ಯಮಿ ಎಸ್ ಆರ್ ಜಿತೇಂದ್ರ ಸುವರ್ಣ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಶ್ರೀಮತಿ ಗೀತಾಂಜಲಿ ಸುವರ್ಣ ಉಡುಪಿ, ಶ್ರೀಮತಿ ಕೃತಿನ್ ಅಮೀನ್ ಮಂಗಳೂರು ಹಾಗೂ ಇತರ ಗಣ್ಯರು ಹಾಜರಿದ್ದರು. ಗೆಜ್ಜೆಗಿರಿಯ ಯಾತ್ರಿ ನಿವಾಸದ ಉದ್ಘಾಟನೆಯ ಸಂದರ್ಭದಲ್ಲಿ ಹೆಚ್ಚಿನ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಯವರು ತಿಳಿಸಿದರು.

ಪ್ರಜ್ಞಾ ಓಡಿಲ್ನಾಳ ನಿರೂಪಿಸಿದ ಕಾರ್ಯಕ್ರಮದಲ್ಲಿ ದುಬೈ ಬಿಲ್ಲವ ಬಂಧುಗಳ ಮತ್ತು ಶ್ರೀಮತಿ ಶೃತಿ ಹೆರಾಜೆ ತಂಡದವರಿಂದ ನೃತ್ಯ ಪ್ರದರ್ಶನ ನೆರೆದಿದ್ದ ಜನರ ಮನ ಸೂರೆಗೊಂಡಿತು.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!