22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ವಿಚಾರಣೆಗೆ ಈವರೆಗೂ ಹಾಜರಾಗಿಲ್ಲ. ಈ ನಾಲ್ಕು ಮಂದಿ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ‌. ಸುಜಾತ ಭಟ್ ಮಾತ್ರ ಎಸ್.ಐ.ಟಿ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ನಾಲ್ಕು ಮಂದಿ ಈವರೆಗೂ ಎಸ್.ಐ.ಟಿ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ವಕೀಲೇ ಅಂಬಿಕಾ ಪ್ರಭು ಅ.27 ರಂದು ಬಂದು ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾ ಎಂದು ಕಾದು ನೋಡಬೇಕಾಗಿದೆ.

Related posts

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!