23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ವಿಚಾರಣೆಗೆ ಈವರೆಗೂ ಹಾಜರಾಗಿಲ್ಲ. ಈ ನಾಲ್ಕು ಮಂದಿ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ‌. ಸುಜಾತ ಭಟ್ ಮಾತ್ರ ಎಸ್.ಐ.ಟಿ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ನಾಲ್ಕು ಮಂದಿ ಈವರೆಗೂ ಎಸ್.ಐ.ಟಿ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ವಕೀಲೇ ಅಂಬಿಕಾ ಪ್ರಭು ಅ.27 ರಂದು ಬಂದು ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾ ಎಂದು ಕಾದು ನೋಡಬೇಕಾಗಿದೆ.

Related posts

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!