July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ವಿಚಾರಣೆಗೆ ಈವರೆಗೂ ಹಾಜರಾಗಿಲ್ಲ. ಈ ನಾಲ್ಕು ಮಂದಿ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ‌. ಸುಜಾತ ಭಟ್ ಮಾತ್ರ ಎಸ್.ಐ.ಟಿ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ನಾಲ್ಕು ಮಂದಿ ಈವರೆಗೂ ಎಸ್.ಐ.ಟಿ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ವಕೀಲೇ ಅಂಬಿಕಾ ಪ್ರಭು ಅ.27 ರಂದು ಬಂದು ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾ ಎಂದು ಕಾದು ನೋಡಬೇಕಾಗಿದೆ.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya
error: Content is protected !!