26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

ಬೆಳ್ತಂಗಡಿ: ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಕರ್ನಾಟಕ ದಕ್ಷಿಣ ಪ್ರಾಂತ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ ಶ್ರೀ ರಾಮ ಶಾಲೆ ಸುಳ್ಕೇರಿಯಲ್ಲಿ ಅ.26 ರಂದು ನಡೆಯಿತು.

ಕಾರ್ಯಕ್ರಮವು ಗೋಪೂಜೆಯ ಮುಖಾಂತರ ಪ್ರಾರಂಭಗೊಂಡು ಕಾರ್ಯಕ್ರಮದ ಅಧ್ಯಕ್ಷರೂ, ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷ ಎಸ್ ಆರ್ ಭಾಸ್ಕರ್ ಶಿರ್ಲಾಲು ಇವರು ಧ್ವಜಾರೋಹಣಗೈವುವ ಮೂಲಕ ಕಾರ್ಯಕ್ರಮವನ್ನು ಚಾಲನೆಗೊಳಿಸಿದರು.


ಮುಖ್ಯ ಅತಿಥಿಗಳಾಗಿ ಸುಳ್ಕೇರಿ ಶ್ರೀರಾಮ ಶಾಲೆ ಅಧ್ಯಕ್ಷ ರಾಜು ಪೂಜಾರಿ, ಕರ್ನಾಟಕ ರಾಜ್ಯ ಭಾರತೀಯ ಕಿಸಾನ್ ಸಂಘ ರಾಜ್ಯಾಧ್ಯಕ್ಷ ಭೀಮ ಸೇನಾ ಕೊಕರೆ, ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ, ಕರ್ನಾಟಕ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ರಮೇಶ್ ರಾಜು, ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ , ದಕ್ಷಿಣ ಪ್ರಾಂತ್ಯ ಮಹಿಳಾ ಪ್ರಮುಖರು ಶ್ರೀಮತಿ ಪುಟ್ಟಮ್ಮ ಶ್ರೀಕಂಠೇಗೌಡ , ಕರ್ನಾಟಕ ದಕ್ಷಿಣ ಪ್ರಾಂತ್ಯ ಪ್ರತಿನಿಧಿ ಸುಬ್ರಾಯ ಬಿ ಎಸ್, ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಅಧ್ಯಕ್ಷ ಸತ್ಯನಾರಾಯಣ ಭಟ್ , ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಅಂಬುಜಾಕ್ಷ ,ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಪ್ರಮುಖರು ಶ್ರೀಮತಿ ಶಾಂಭವಿ , ಲಯನ್ ನಿತ್ಯಾನಂದ ನಾವರ ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಭಾರತೀಯ ಕಿಸಾನ್ ಸಂಘ, ಶಿವಾನಂದ ಹೆಗಡೆ ಕರಂಬಾರು ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಭಾರತೀಯ ಕಿಸಾನ್ ಸಂಘ, ಲಿಂಗಪ್ಪನಾಯ್ಕ ಪ್ರಧಾನ ಕಾರ್ಯದರ್ಶಿ ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ಜಯ ಸಾಲಿಯನ್ ಉಪಾಧ್ಯಕ್ಷರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ವಿಜಯಕುಮಾರ್ ಜೈನ್ ನಾವರ ಮಾಧ್ಯಮ ಪ್ರಮುಖರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು, ಶ್ರೀಮತಿ ಶೀಲಾ ಮಹಿಳಾ ಪ್ರಮುಖರು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ರೈತ ಗೀತೆಯನ್ನು ಬಳಂಜ ಗ್ರಾಮದ ಪ್ರವೀಣ್ ದೇವಾಡಿಗ, ರತ್ನಾಕರ ಶೆಟ್ಟಿ ಪ್ರದೀಪ ರವರು ಹಾಡಿದರು. ದೇವಿ ಪ್ರಸಾದ್ ಅರ್ವ ಹಾಗೂ ಲಿಂಗಪ್ಪನಾಯ್ಕ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಉಪಾಧ್ಯಕ್ಷ ಜಯಶಾಲಿಯನ್ ಸ್ವಾಗತಿಸಿದರು. ಬೆಳ್ತಂಗಡಿ ತಾಲೂಕಿನ ಸುಮಾರು 42 ಗ್ರಾಮಗಳ ಸುಮಾರು 200 ರೈತ ಸದಸ್ಯರು ಭಾಗವಹಿಸಿ ತರಬೇತಿಯನ್ನು ಪಡೆದರು. ಲಯನ್ ನಿತ್ಯಾನಂದ ನಾವರ ರವರ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!