ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆ ಸುಜಾತ ಭಟ್ ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು. ಉಳಿದ ನಾಲ್ಕು ಮಂದಿ ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಮಧ್ಯಾಹ್ನ ಬಂದ ನಾಲ್ಕು ಮಂದಿಯ ಪರ ವಕೀಲರಾದ ಅಂಬಿಕಾ ಪ್ರಭು ಎಸ್.ಐ.ಟಿ ವಿಚಾರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು ಅದರಂತೆ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದು, ಉಳಿದಂತೆ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡರಿಗೆ ನಾಲ್ಕು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಲಾಗಿದೆ ಎಂದು ಎಸ್‌.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya
error: Content is protected !!