July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಬೈಕ್-ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!