September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!