25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮಿಸಲಾಯಿತು. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮಗು ಹಾಗೂ ತಂದೆಯೊಂದಿಗೆ ಗ್ರೀಟಿಂಗ್ ಕಾರ್ಡ್ ತಯಾರಿಯ ಸ್ಪರ್ಧೆಯನ್ನು ನೆರವೇರಿಸಲಾಯಿತು.

ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತರಗತಿ ಕೊಠಡಿಯ ಶೃಂಗಾರ ಸ್ಪರ್ಧೆಯನ್ನು ಆಯೋಜಿಸಲಾಯಿತು. 9ನೇ ಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರೆ 9ನೇ ಬಿ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.
ಮುಖ್ಯ ಅತಿಥಿಯಾಗಿ ಪ್ರಕಾಶ್ ಕಾಮತ್ ಪ್ರಾಂಶುಪಾಲರು ಎಸ್ ಡಿ ಎಂ ಮಹಿಳಾ ಪೊಲಿಟೆಕ್ನಿಕ್ ಕಾಲೇಜ್ ಉಜಿರೆ, ಇವರು ಭಾಗವಹಿಸಿ ಶುಭಾಶಯಗಳು ವ್ಯಕ್ತಪಡಿಸಿದರು. ಅಲ್ಲದೆ ದೀಪಾವಳಿಯ ಆಚರಣೆಯಲ್ಲಿ ನಮ್ಮ ಸಂಸ್ಥೆಗಳು ಮಕ್ಕಳಿಗೆ ಹೊಸ ಮೆರಗನ್ನು ನೀಡುತ್ತಿದೆ ಎಂಬುದರೊಂದಿಗೆ, ದೀಪ, ಹಣತೆ ಬೆಳಗಿಸಿ, ಲಕ್ಷ್ಮಿ ಪೂಜೆಯೊಂದಿಗೆ, ದೀಪಾವಳಿಗೆ ನೀರು ತುಂಬಿಸುವ ವಿಶೇಷತೆಯೊಂದಿಗೆ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಶಿಕ್ಷಕರುಗಳಾದ ಮೇನಿತಾ ಶೆಟ್ಟಿ, ಚೇತನ, ಕಾರೂಣ್ಯ, ಮುರಳಿ, ಪ್ರಮೀಳಾ ರವರ ಸಂಘಟನೆಯೊಂದಿಗೆ ಅಧ್ಯಾಪಕ ವೃಂದ ದವರ ಸಹಕಾರದೊಂದಿಗೆ, ಕುಮಾರಿ ನಿಧಿಶಾ ನಿರೂಪಿಸಿ, ಕುಮಾರಿ ದಿಶಾ ಡಿಎ ಸ್ವಾಗತಿಸಿ, ಆಧ್ಯಾ ಜೈನ್ ಧನ್ಯವಾದವಿತ್ತರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!