July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮಿಸಲಾಯಿತು. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮಗು ಹಾಗೂ ತಂದೆಯೊಂದಿಗೆ ಗ್ರೀಟಿಂಗ್ ಕಾರ್ಡ್ ತಯಾರಿಯ ಸ್ಪರ್ಧೆಯನ್ನು ನೆರವೇರಿಸಲಾಯಿತು.

ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತರಗತಿ ಕೊಠಡಿಯ ಶೃಂಗಾರ ಸ್ಪರ್ಧೆಯನ್ನು ಆಯೋಜಿಸಲಾಯಿತು. 9ನೇ ಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರೆ 9ನೇ ಬಿ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.
ಮುಖ್ಯ ಅತಿಥಿಯಾಗಿ ಪ್ರಕಾಶ್ ಕಾಮತ್ ಪ್ರಾಂಶುಪಾಲರು ಎಸ್ ಡಿ ಎಂ ಮಹಿಳಾ ಪೊಲಿಟೆಕ್ನಿಕ್ ಕಾಲೇಜ್ ಉಜಿರೆ, ಇವರು ಭಾಗವಹಿಸಿ ಶುಭಾಶಯಗಳು ವ್ಯಕ್ತಪಡಿಸಿದರು. ಅಲ್ಲದೆ ದೀಪಾವಳಿಯ ಆಚರಣೆಯಲ್ಲಿ ನಮ್ಮ ಸಂಸ್ಥೆಗಳು ಮಕ್ಕಳಿಗೆ ಹೊಸ ಮೆರಗನ್ನು ನೀಡುತ್ತಿದೆ ಎಂಬುದರೊಂದಿಗೆ, ದೀಪ, ಹಣತೆ ಬೆಳಗಿಸಿ, ಲಕ್ಷ್ಮಿ ಪೂಜೆಯೊಂದಿಗೆ, ದೀಪಾವಳಿಗೆ ನೀರು ತುಂಬಿಸುವ ವಿಶೇಷತೆಯೊಂದಿಗೆ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಶಿಕ್ಷಕರುಗಳಾದ ಮೇನಿತಾ ಶೆಟ್ಟಿ, ಚೇತನ, ಕಾರೂಣ್ಯ, ಮುರಳಿ, ಪ್ರಮೀಳಾ ರವರ ಸಂಘಟನೆಯೊಂದಿಗೆ ಅಧ್ಯಾಪಕ ವೃಂದ ದವರ ಸಹಕಾರದೊಂದಿಗೆ, ಕುಮಾರಿ ನಿಧಿಶಾ ನಿರೂಪಿಸಿ, ಕುಮಾರಿ ದಿಶಾ ಡಿಎ ಸ್ವಾಗತಿಸಿ, ಆಧ್ಯಾ ಜೈನ್ ಧನ್ಯವಾದವಿತ್ತರು.

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!