23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮಿಸಲಾಯಿತು. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮಗು ಹಾಗೂ ತಂದೆಯೊಂದಿಗೆ ಗ್ರೀಟಿಂಗ್ ಕಾರ್ಡ್ ತಯಾರಿಯ ಸ್ಪರ್ಧೆಯನ್ನು ನೆರವೇರಿಸಲಾಯಿತು.

ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತರಗತಿ ಕೊಠಡಿಯ ಶೃಂಗಾರ ಸ್ಪರ್ಧೆಯನ್ನು ಆಯೋಜಿಸಲಾಯಿತು. 9ನೇ ಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರೆ 9ನೇ ಬಿ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಂಚಿಕೊಂಡರು.
ಮುಖ್ಯ ಅತಿಥಿಯಾಗಿ ಪ್ರಕಾಶ್ ಕಾಮತ್ ಪ್ರಾಂಶುಪಾಲರು ಎಸ್ ಡಿ ಎಂ ಮಹಿಳಾ ಪೊಲಿಟೆಕ್ನಿಕ್ ಕಾಲೇಜ್ ಉಜಿರೆ, ಇವರು ಭಾಗವಹಿಸಿ ಶುಭಾಶಯಗಳು ವ್ಯಕ್ತಪಡಿಸಿದರು. ಅಲ್ಲದೆ ದೀಪಾವಳಿಯ ಆಚರಣೆಯಲ್ಲಿ ನಮ್ಮ ಸಂಸ್ಥೆಗಳು ಮಕ್ಕಳಿಗೆ ಹೊಸ ಮೆರಗನ್ನು ನೀಡುತ್ತಿದೆ ಎಂಬುದರೊಂದಿಗೆ, ದೀಪ, ಹಣತೆ ಬೆಳಗಿಸಿ, ಲಕ್ಷ್ಮಿ ಪೂಜೆಯೊಂದಿಗೆ, ದೀಪಾವಳಿಗೆ ನೀರು ತುಂಬಿಸುವ ವಿಶೇಷತೆಯೊಂದಿಗೆ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಶಿಕ್ಷಕರುಗಳಾದ ಮೇನಿತಾ ಶೆಟ್ಟಿ, ಚೇತನ, ಕಾರೂಣ್ಯ, ಮುರಳಿ, ಪ್ರಮೀಳಾ ರವರ ಸಂಘಟನೆಯೊಂದಿಗೆ ಅಧ್ಯಾಪಕ ವೃಂದ ದವರ ಸಹಕಾರದೊಂದಿಗೆ, ಕುಮಾರಿ ನಿಧಿಶಾ ನಿರೂಪಿಸಿ, ಕುಮಾರಿ ದಿಶಾ ಡಿಎ ಸ್ವಾಗತಿಸಿ, ಆಧ್ಯಾ ಜೈನ್ ಧನ್ಯವಾದವಿತ್ತರು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!