22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
error: Content is protected !!