July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.

ಅ.25ರಂದು ರಾತ್ರಿ ಪನೋಡಿಬೈಲು ಪ್ರದೇಶದಲ್ಲಿ ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿಹಾನಿ ಉಂಟುಮಾಡಿವೆ. ದಿಡುಪೆ ಪರಿಸರದ ಅಡ್ಡದಕೋಡಿ, ಪೂರ್ಜೆಬೈಲ, ಕಡಮಗುಂಡಿ, ಕುಮೇರು ಮೊದಲಾದ ಪರಿಸರಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ಪ್ರತಿದಿನ ನುಗ್ಗುತ್ತಿವೆ. ಸ್ಥಳೀಯರು ಹೇಳುವ ಪ್ರಕಾರ 10 ರಿಂದ 12 ಕಾಡಾನೆಗಳು ತೋಟಗಳಿಗೆ ದಾಳಿ ಇಡುತ್ತಿವೆ. ಈ ಪರಿಸರಗಳಲ್ಲಿ ಹಗಲು ಹೊತ್ತು ತಿರುಗಾಟ ನಡೆಸಲು ಭಯದ ವಾತಾವರಣ ಇದೆ.

ಇತ್ತೀಚಿನ ಕೆಲವು ದಿನಗಳ ಹಿಂದೆ 10ಕ್ಕಿಂತ ಅಧಿಕ ಕಾಡಾನೆಗಳು ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಗ್ರಾಮದತ್ತ ಕಾಲಿಟ್ಟಿದ್ದವು. ಬಳಿಕ ಆನೆಗಳ ಹಿಂಡು ಇಲ್ಲಿಂದ ದಿಡುಪೆ ಪರಿಸರದತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ದಿಡುಪೆ ಪರಿಸರದಲ್ಲಿ ಒಂಟಿ ಸಲಗ ಅಥವಾ ಮರಿಯಾನೆ ಸಹಿತ ಮೂರು ಕಾಡಾನೆಗಳು ಆಗಾಗ ಕಂಡುಬರುತ್ತವೆ. ಆದರೆ ಈ ಬಾರಿ ಹತ್ತರಿಂದ ಹೆಚ್ಚಿನ ಸಂಖ್ಯೆಯ ಆನೆಗಳು ತೋಟಗಳಿಗೆ ದಾಳಿ ನಡೆಸುತ್ತಿವೆ.

Related posts

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!