July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

ನಡ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ಇವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಚಂದ್ರಶೇಖರ್ ಇವರು ಸಾತ್ವಿಕ ಸ್ವಭಾವದವರಾಗಿದ್ದು ಎಲ್ಲರಿಗೂ ಚಂದ್ರನಂತೆ ತಂಪನ್ನು ನೀಡುವವರು. ಯಾರನ್ನು ದ್ವೇಷಿಸದ ಅಜಾತಶತ್ರು.” ಎಂದು ನಿವೃತ್ತ ಪ್ರಾಂಶುಪಾಲರಾದ ಯದುಪತಿ ಗೌಡ ಇವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಸುರಕ್ಷಿತ, ಹಿರಿಯ ವಿದ್ಯಾರ್ಥಿ ನಿತೇಶ್, ಉಪನ್ಯಾಸಕಿ ವಸಂತಿ ಪಿ ರವರು ಶ್ರೀಯುತರ ನಿಸ್ವಾರ್ಥ ಸೇವೆಯ ಬಗ್ಗೆ, ಕಾಲೇಜಿಗೆ ನೀಡಿದ ಸಾಕಷ್ಟು ಕೊಡುಗೆಗಳ ಬಗ್ಗೆ ಮಾತನಾಡಿದರು. ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಡಿ ಸನ್ಮಾನ ಪತ್ರವನ್ನು ವಾಚಿಸಿದ ಬಳಿಕ ಕಾಲೇಜಿನ ಉಪನ್ಯಾಸಕರು, ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ನಡ ಪ್ರೌಢಶಾಲಾ ವಿಭಾಗದ ಅಧ್ಯಾಪಕರು, ಊರಿನವರು ಪ್ರತ್ಯೇಕ ಪ್ರತ್ಯೇಕವಾಗಿ ಸನ್ಮಾನಿಸಿದರು.


ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಚಂದ್ರಶೇಖರ್ ಇವರು ತಮ್ಮ ಆರಂಭದ ಬದುಕಿನ ಕಷ್ಟದ ದಿನಗಳ ಬಗ್ಗೆ, ತನ್ನ 32 ವರ್ಷಗಳ ವಿಸ್ತಾರವಾದ ಸೇವಾ ಅನುಭವಗಳ ಬಗ್ಗೆ, ಸೇವಾ ಸಂತೃಪ್ತಿಯ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು.
ಮುಖ್ಯಅಭ್ಯಾಗತರಾಗಿ ಅಜಿತ್ ಆರಿಗ, ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಮೋಹನ್ ಬಾಬು, ಜನಾರ್ದನ ಗೌಡ, ನಾರ್ಬರ್ಟ್ ಮಾರ್ಟಿಸ್, ಕಾಲೇಜು ನಾಯಕ ಭವಿತ್, ಕಾರ್ಯದರ್ಶಿ ಹೀನಾ ಕೌಸರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ನಿರೂಪಿಸಿ, ಶ್ರೀಮತಿ ಪವಿತ್ರ ಧನ್ಯವಾದವಿತ್ತರು.

Related posts

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya
error: Content is protected !!