25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ ಅ.26ರಂದು ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅನಂತೇಶ್ವರ ಫ್ರೆಂಡ್ಸ್ ಇದರ ಅಧ್ಯಕ್ಷ ಸಂತೋಷ್ ನಾಯ್ಕ ಕುದ್ದoಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಚೇತನ್ ಸಾಲ್ಯಾನ್ ” ಚೇತನ್ ಕನ್ಸ್ಟ್ರಕ್ಷನ್ ” ಮಾಚಾರು, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಬೆಳಾಲು ಇದರ ಗೌರವಾಧ್ಯಕ್ಷ ಶಿವಕುಮಾರ ಬಾರಿತ್ತಾಯ ಪಾರಲ, ಮುಖ್ಯ ತೀರ್ಪುಗಾರರಾದ ಧರ್ಮೇಂದ್ರ ಕುಮಾರ್, ಸಿಂಧೂರ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷೆ ಶ್ರೀಮತಿ ನಿಶಾಯಶವಂತ್ ಬನಂದೂರು, ಅನಂತೇಶ್ವರ ಫ್ರೆಂಡ್ಸ್ ಇದರ ಉಪಾಧ್ಯಕ್ಷ ರೂಪೇಶ್ ಪೂಜಾರಿ ಪೋಸೊಟ್ಟು ,ಅನಂತೇಶ್ವರ ಫ್ರೆಂಡ್ಸ್ ಇದರ ಕಾರ್ಯದರ್ಶಿಯಾದ ಹರ್ಷಿತ್ ಗೌಡ ಎರ್ಧೊಟ್ಟು ಉಪಸ್ಥಿತರಿದ್ದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಗೌಡ ಆರಿಕೋಡಿ ಇವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಹರಿಪ್ರಸಾದ್ ಗೌಡ ಅರಣೆಮಾರು ಸ್ವಾಗತಿಸಿ, ಗಿರೀಶ್ ಗೌಡ ಮಂಜೋತ್ತು ಕಾರ್ಯಕ್ರಮ ನಿರೂಪಿಸಿದರು. ಯಶವಂತ್ ಗೌಡ ಬನಂದೂರು ವಂದಿಸಿದರು. ನಂತರ ಕೆಸರುಗದ್ದೆಯಲ್ಲಿ ನಡೆದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ವಿಜೇತರ ಪಟ್ಟಿಯನ್ನು ಕಿರಣ್ ಸುವರ್ಣ ಇರಂತ್ಯಾರು ವಾಚಿಸಿದರು.

Related posts

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya
error: Content is protected !!