ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ ಅ.26ರಂದು ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅನಂತೇಶ್ವರ ಫ್ರೆಂಡ್ಸ್ ಇದರ ಅಧ್ಯಕ್ಷ ಸಂತೋಷ್ ನಾಯ್ಕ ಕುದ್ದoಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಚೇತನ್ ಸಾಲ್ಯಾನ್ ” ಚೇತನ್ ಕನ್ಸ್ಟ್ರಕ್ಷನ್ ” ಮಾಚಾರು, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಬೆಳಾಲು ಇದರ ಗೌರವಾಧ್ಯಕ್ಷ ಶಿವಕುಮಾರ ಬಾರಿತ್ತಾಯ ಪಾರಲ, ಮುಖ್ಯ ತೀರ್ಪುಗಾರರಾದ ಧರ್ಮೇಂದ್ರ ಕುಮಾರ್, ಸಿಂಧೂರ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷೆ ಶ್ರೀಮತಿ ನಿಶಾಯಶವಂತ್ ಬನಂದೂರು, ಅನಂತೇಶ್ವರ ಫ್ರೆಂಡ್ಸ್ ಇದರ ಉಪಾಧ್ಯಕ್ಷ ರೂಪೇಶ್ ಪೂಜಾರಿ ಪೋಸೊಟ್ಟು ,ಅನಂತೇಶ್ವರ ಫ್ರೆಂಡ್ಸ್ ಇದರ ಕಾರ್ಯದರ್ಶಿಯಾದ ಹರ್ಷಿತ್ ಗೌಡ ಎರ್ಧೊಟ್ಟು ಉಪಸ್ಥಿತರಿದ್ದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಗೌಡ ಆರಿಕೋಡಿ ಇವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಹರಿಪ್ರಸಾದ್ ಗೌಡ ಅರಣೆಮಾರು ಸ್ವಾಗತಿಸಿ, ಗಿರೀಶ್ ಗೌಡ ಮಂಜೋತ್ತು ಕಾರ್ಯಕ್ರಮ ನಿರೂಪಿಸಿದರು. ಯಶವಂತ್ ಗೌಡ ಬನಂದೂರು ವಂದಿಸಿದರು. ನಂತರ ಕೆಸರುಗದ್ದೆಯಲ್ಲಿ ನಡೆದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ವಿಜೇತರ ಪಟ್ಟಿಯನ್ನು ಕಿರಣ್ ಸುವರ್ಣ ಇರಂತ್ಯಾರು ವಾಚಿಸಿದರು.

Related posts

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
error: Content is protected !!