23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆಯ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾಹನೋದ್ಯಮ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಅನ್ವೇಷಿಸಲು ಉತ್ತಮ ವೇದಿಕೆಯಾಗಿತು.

ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ (ಟಿಕೆಎಂ), ಬೆಂಗಳೂರು, ದೇಶದ ಪ್ರಮುಖ ವಾಹನ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿ, ನೇಮಕಾತಿ ಪ್ರಕ್ರಿಯೆಗಾಗಿ ಕಾಲೇಜಿಗೆ ಭೇಟಿ ನೀಡಿತು. ಕಾರ್ಯಕ್ರಮವು ಪ್ಲೇಸ್‌ಮೆಂಟ್ ಅಧಿಕಾರಿ ಶ್ರೀ ಅಮರೇಶ ಹೆಬ್ಬಾರ್ ಅವರ ಹಾರ್ದಿಕ ಸ್ವಾಗತದ ಮಾತುಗಳಿಂದ ಆರಂಭವಾಯಿತು.

ವೇದಿಕೆಯಲ್ಲಿ ಟಿಕೆಎಂ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳು ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ನ ಪ್ರಾಂಶುಪಾಲರಾದ ಶ್ರೀ ಸಂತೋಷ ಉಪಸ್ಥಿತರಿದ್ದರು. ಪ್ರಾoಶುಪಾಲರು ತಮ್ಮ ಅಮೂಲ್ಯ ಮಾತುಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು ಹಾಗೂ ಯಶಸ್ಸಿನ ಹಾರೈಕೆ ಸಲ್ಲಿಸಿದರು. ಎಚ್‌ಆರ್‌ ತಂಡವು ಸಂಸ್ಥೆಯ ಚಟುವಟಿಕೆಗಳು, ಉದ್ಯೋಗಾವಕಾಶಗಳು ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ದೊರೆಯುವ ವೃತ್ತಿ ಬೆಳವಣಿಗೆಯ ಕುರಿತು ಮಾಹಿತಿ ನೀಡಿದರು.

ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳಿಂದ ಬಂದ ಒಟ್ಟು 98 ವಿದ್ಯಾರ್ಥಿಗಳು ಉತ್ಸಾಹಭರಿತವಾಗಿ ಕ್ಯಾಂಪಸ್ ಡ್ರೈವ್‌ನಲ್ಲಿ ಭಾಗವಹಿಸಿದರು ಮತ್ತು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಕಾರ್ಯಕ್ರಮವನ್ನು ಪ್ಲೇಸ್‌ಮೆಂಟ್ ಸಮಿತಿಯ ಸದಸ್ಯರಾದ ವರದರಾಜ ಬಾಲ್ಲಾಳ್, ಶಿವರಾಜ್ ಪಿ, ಅಶ್ವಿನ್ ಮರಾಟೆ, ಶ್ರೀಮತಿ ಶಾದ್ವಲ ಸೆಬಾಸ್ಟಿಯನ್, ಅಶೋಕ್ ಮತ್ತು ಶ್ರೀಮತಿ ವಿದ್ಯಾ ಲಕ್ಷ್ಮಿ ಅವರ ಸಂಯೋಜನೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳನ್ನು ಖ್ಯಾತ ಕೈಗಾರಿಕಾ ಸಂಸ್ಥೆಗಳೊಂದಿಗೆ ಸಂಪರ್ಕಿಸಲು ಎಸ್‌ಡಿಎಂ ಪಾಲಿಟೆಕ್ನಿಕ್ ಕೈಗೊಂಡ ಮತ್ತೊಂದು ಯಶಸ್ವಿ ಪ್ರಯತ್ನವಾಯಿತು.

Related posts

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya
error: Content is protected !!