23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್ , ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ, ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸುತ್ತಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಪಠ್ಯ ಕ್ರಮದ ಒಂಬತ್ತನೆಯ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 98 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರು ಹಾಗೂ ಸಿ ಬಿ ಎಸ್ ಇ/ಐ ಸಿ ಎಸ್ ಇ ಯ ವಿದ್ಯಾರ್ಥಿಗಳು ಶೇಕಡಾ 95 ಮತ್ತು ಹೆಚ್ಚುಅಂಕ ಪಡೆದವರು ಈ ಯೋಜನೆಗೆ ಅರ್ಹರು. ಹತ್ತನೇ ತರಗತಿಯ ಮಧ್ಯಾವಧಿ ಪರೀಕ್ಷೆಯಲ್ಲಿ ಕ್ರಮವಾಗಿ 98 ಶೇಕಡಾ ಹಾಗೂ 95 ಶೇಕಡಾಕ್ಕಿಂತ ಅಧಿಕ ಪಡೆದವರಿಗೆ ಕೂಡಾ ಈ ಯೋಜನೆಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ.

ಎಕ್ಸೆಲ್ ಬೆಳಕು ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪದವಿ ಪೂರ್ವ ಶಿಕ್ಷಣ ಹಾಗೂ ಅವರ ಆಯ್ಕೆಯ ಕೋಚಿಂಗ್ ನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜು ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಅಥವಾ +918867242769 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya
error: Content is protected !!